Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ನೇಪಾಳದ ದಂಗೆ……

ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ…

2 hours ago

22 ವರ್ಷದ ಯುವಕ‌ ಮನೆಯಲ್ಲಿ ನೇಣಿಗೆ ಶರಣು

22 ವರ್ಷದ ಯುವಕ‌ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…

5 hours ago

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

16 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

16 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

20 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

22 hours ago