Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

14 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

15 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

21 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

22 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago