Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago