Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago