Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

5 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

6 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago