Categories: ಕೋಲಾರ

ಕೋಲಾರ ಪಿಎಲ್ ಡಿ ಬ್ಯಾಂಕ್‌ ಗೆ ಯಲವಾರ ಸೊಣ್ಣೇಗೌಡ ಸಾರಥ್ಯ

ಕೋಲಾರ: ಅಧಿಕಾರದ ಆಸೆಗಾಗಿ ಪೈಪೋಟಿ ಪಡುವ ಸಂದರ್ಭದಲ್ಲಿ ಬಯಸದೇ ಬಂದ ರೀತಿಯಲ್ಲಿ ಜಿಲ್ಲೆಯ ಹಿರಿಯ ಸಹಕಾರಿ ಧುರೀಣರ ಮಾರ್ಗದರ್ಶನದಲ್ಲಿ ಬೇಡ ಎಂದು ದೂರ ನಡೆದರು ಕೊನೆಯಲ್ಲಿ ಎಳೆದು ತಂದು ಕೋಲಾರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರ ಪಟ್ಟ ಕಟ್ಟಿದ ಪ್ರಸಂಗ ಪಿಎಲ್ ಡಿ ಬ್ಯಾಂಕ್ ನಲ್ಲಿಂದು ನಡೆದಿದೆ.

ಹಿಂದಿನ ಅವಧಿಗೆ ಕೋಲಾರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಕೃಷ್ಣೇಗೌಡರಿಂದ ತೆರೆವುಗೊಂಡ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ತಾನು ಆಗಬೇಕು ನಾನು ಆಗಬೇಕು ಎಂದು ಮೂವರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ರೈತರ ಸ್ವಾಭಿಮಾನದ ಬ್ಯಾಂಕ್ ಇಲ್ಲಿ ಅವಿರೋಧವಾಗಿ ಆಯ್ಕೆಯಾಗಬೇಕು ಎಂದು ಹಿರಿಯರು ತೀರ್ಮಾನಿಸಿ, ಯಾರಾದರೂ ಒಬ್ಬರು ಆಗಲಿ ಎಂದು ತಿಳಿಸಿದ್ದರು. ಆದರೆ, ಮೂವರನ್ನು ಮನವೊಲಿಸಿದರು ಕೂಡ ಯಾರು ನಾಮಪತ್ರಗಳನ್ನು ವಾಪಸ್ಸು ಪಡೆಯಲಿಲ್ಲ. ಅಂತಿಮವಾಗಿ ಹಿರಿಯ ಸಹಕಾರಿ ಧುರೀಣರ ಮಾರ್ಗದರ್ಶನದಲ್ಲಿ ಹಿರಿಯ ಸಹಕಾರಿ ಧುರೀಣ ಹಾಗೂ ಹಾಲಿ ಪಿಎಲ್ ಡಿ ಬ್ಯಾಂಕ್ ರಾಜ್ಯ ನಿರ್ದೇಶಕ ಯಲವಾರ ಸೊಣ್ಣೇಗೌಡ ಅವರನ್ನು ಬಲವಂತವಾಗಿ ನಾಮಪತ್ರ ಸಲ್ಲಿಸಿ ಅಧ್ಯಕ್ಷ ಪಟ್ಟ ಕಟ್ಟಿದ್ದಾರೆ.

ಇವತ್ತಿನ ಯಾವುದೇ ಚುನಾವಣೆಗಳು ಇರಲಿ ಸ್ಪರ್ಧೆ, ಪೈಪೋಟಿ ಇದ್ದೇ ಇರುತ್ತದೆ. ಅದರಲ್ಲೂ, ಪ್ರತಿಷ್ಠೆಗಳೇ ಹೆಚ್ಚು ಅದರಲ್ಲೂ ಅಧಿಕಾರದ ಆಸೆ ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ, ಪಿಎಲ್ ಡಿ ಬ್ಯಾಂಕ್ ಗೆ ನೂತನವಾಗಿ ಆಯ್ಕೆಯಾದ ಯಲವಾರ ಸೊಣ್ಣೇಗೌಡ ನಾನು ಒಬ್ಬ ನಿರ್ದೇಶಕನಾಗಿ ರೈತರಿಗೆ ಎಷ್ಟು ನ್ಯಾಯ ಕೊಡಿಸಲು ಸಾಧ್ಯವೋ ಅಷ್ಟು ಮಾಡಿಕೊಂಡು ಹೋಗುತ್ತೇವೆ. ನನಗೆ ಯಾವುದೇ ಕಾರಣಕ್ಕೂ ಅಧ್ಯಕ್ಷ ಪದವಿ ಬೇಡ ಎಂದರು.

ಪಟ್ಟು ಬಿಡದ ಹಿರಿಯ ಸಹಕಾರಿಗಳು ನೀನು ಆಗಲೇ ಬೇಕು ನಾಮಪತ್ರ ಸಲ್ಲಿಸಿ ಉಳಿದ ಮೂವರ ನಾಮಪತ್ರಗಳನ್ನು ವಾಪಸು ಪಡೆದು ಅಂತಿಮವಾಗಿ ಯಲವಾರ ಸೊಣ್ಣೇಗೌಡ ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡಿದರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ  ನೂತನ ಅಧ್ಯಕ್ಷ ಯಲವಾರ ಸೊಣ್ಣೇಗೌಡ, ಕೆಲಸ ಮಾಡಲಿಕ್ಕೆ ಅಧಿಕಾರವೇ ಬೇಕಾಗಿಲ್ಲ ನನಗೆ ಅಧ್ಯಕ್ಷ ಪಟ್ಟ ಬೇಡ ಎಂದು ಹೇಳಿದರೂ, ಹಿರಿಯ ಸಹಕಾರಿಗಳು ನನ್ನನ್ನು ಅಧ್ಯಕ್ಷರಾಗಿ ಮಾಡಿದ್ದಾರೆ. ಮುಂದೆ ತಾಲೂಕಿನ ರೈತರು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ಹಿರಿಯ ಸಹಕಾರಿಗಳ ಮಾರ್ಗದರ್ಶನದಲ್ಲಿ ಬ್ಯಾಂಕ್ ಮಾದರಿಯಾಗುವ ರೀತಿಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಡೆಸಿಕೊಂಡು ಹೋಗುತ್ತನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸ್ಥಾನಕ್ಕೆ ಸುನಂದಮ್ಮ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

 ಈ ವೇಳೆ ಹಿರಿಯ ಸಹಕಾರಿ ಮುಖಂಡರಾದ ಛತ್ರಕೋಡಿಹಳ್ಳಿ ಮುನೇಗೌಡ, ಬ್ಯಾಲಹಳ್ಳಿ ಗೋವಿಂದಗೌಡ, ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ಕೋಚಿಮುಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್, ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು, ತಲಗುಂದ ನರಸಿಂಹರಾಜು, ಸೇರಿದಂತೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕರು ಇದ್ದು, ಚುನಾವಣಾಧಿಕಾರಿಯಾಗಿ ಜಗದೀಶ್ ಕಾರ್ಯನಿರ್ವಹಿಸಿದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

54 minutes ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

2 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

4 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

7 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

18 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago