ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮೂಲ ಆಶಯಗಳನ್ನು ಬದಿಗೊತ್ತಿ ಅವರ ಹೆಸರಿನಲ್ಲಿ ಕೋಲಾರ ಬಂದ್ ಆಚರಣೆ ನೆಪದಲ್ಲಿ ದೌರ್ಜನ್ಯ ಮತ್ತು ದಬ್ಬಾಳಿಕೆಯ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲಾಗಿದ್ದ ಶ್ರೀಕೃಷ್ಣನ ಗೀತೆಯ ಸಂದೇಶಗಳನ್ನು ಹರಿದು ಹಾಕಿ ಕಾಲಿನಿಂದ ಒದ್ದಿರುವ ಕೆಲವು ದಲಿತ ಸಂಘಟನೆಯ ಮುಖಂಡರ ನಡೆಯನ್ನು ಜೆಡಿಎಸ್- ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ಶುಕ್ರವಾರ ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಕೋಲಾರ ಬಂದ್ ಆಚರಣೆಯ ನೆಪದಲ್ಲಿ ಕೋಲಾರ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಗೆ ನುಗ್ಗಿದ ದಲಿತ ಪರ ಸಂಘಟನೆಗಳ ಮುಖಂಡರು ಶ್ರೀಕೃಷ್ಣನ ಸಂದೇಶದ ಬ್ಯಾನರ್ ಹರಿದು ಹಾಕುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದು, ಅಂಬೇಡ್ಕರ್ ಹೆಸರಿನಲ್ಲಿಯೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಅಂಬೇಡ್ಕರ್ ಅವರು ಸಂವಿಧಾನದ ಮೂಲ ಆಶಯಗಳಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಆದರೆ, ಅವರ ಹೆಸರು ಹೇಳಿಕೊಂಡು ಕೆಲವು ಮುಖಂಡರು ದೌರ್ಜನ್ಯ ದಬ್ಬಾಳಿಕೆಯ ಮೂಲಕ ಅಂಬೇಡ್ಕರ್ ಹೆಸರಿಗೆ ಕಳಂಕ ತರುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸಮಾಜದಲ್ಲಿ ಯಾವುದೇ ಧರ್ಮದ ಬಗ್ಗೆ ಅವಹೇಳನವಾಗಲಿ ಅವರ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುದು ಇದ್ದರು ಅದರ ವಿರುದ್ದವಾಗಿ ನಡೆದುಕೊಂಡಿದ್ದಾರೆ. ದೇವಸ್ಥಾನಕ್ಕೆ ದಲಿತ ಪ್ರವೇಶವಾಗಬೇಕು ಎಂದು ಒತ್ತಾಯ ಮಾಡುವ ದಲಿತ ಮುಖಂಡರು ಶ್ರೀಕೃಷ್ಣನ ಪೋಟೋ ಹರಿದು ಕಾಲಿನಿಂದ ತುಳಿಯುತ್ತಾರೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕೆಲವು ದಲಿತಪರ ಸಂಘಟನೆಗಳು ಕಾಂಗ್ರೆಸ್ ಪಕ್ಷದ ಮುಖವಾಡ ಧರಿಸಿಕೊಂಡು ದೌರ್ಜನ್ಯ ದಬ್ಬಾಳಿಕೆಯ ಮೂಲಕ ಪ್ರತಿಭಟನೆ ಮಾಡುವುದು ಸರಿಯಲ್ಲ. ಅಂಬೇಡ್ಕರ್ ಅವರ ರಾಜಕೀಯ ಜೀವನದಲ್ಲಿ ಇದೇ ಕಾಂಗ್ರೆಸ್ ಪಕ್ಷವು ತೊಂದರೆ ಕೊಟ್ಟಿದೆ ಎಂಬುದನ್ನು ದೇಶದ ಜನತೆ ಮರೆತಿಲ್ಲ ಅಂಬೇಡ್ಕರ್ ಅವರ ಸಿದ್ದಾಂತಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೆಲವರು ಬೆಂಬಲ ಕೊಟ್ಟು ಬಂದ್ ನೆಪದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ದ ಕೂಡಲೇ ಜಿಲ್ಲಾಡಳಿತವು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…