ಕೋಲಾರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮೂಲ ಆಶಯಗಳನ್ನು ಬದಿಗೊತ್ತಿ ಅವರ ಹೆಸರಿನಲ್ಲಿ ಕೋಲಾರ ಬಂದ್ ಆಚರಣೆ ನೆಪದಲ್ಲಿ ದೌರ್ಜನ್ಯ ಮತ್ತು ದಬ್ಬಾಳಿಕೆಯ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಲಾಗಿದ್ದ ಶ್ರೀಕೃಷ್ಣನ ಗೀತೆಯ ಸಂದೇಶಗಳನ್ನು ಹರಿದು ಹಾಕಿ ಕಾಲಿನಿಂದ ಒದ್ದಿರುವ ಕೆಲವು ದಲಿತ ಸಂಘಟನೆಯ ಮುಖಂಡರ ನಡೆಯನ್ನು ಜೆಡಿಎಸ್- ಬಿಜೆಪಿ ಮೈತ್ರಿ ಪಕ್ಷದ ಮುಖಂಡರಾದ ಯಲುವಗುಳಿ ನಾಗರಾಜ್, ಜಯನಗರ ಮುನಿಯಪ್ಪ, ಹಾರೋಹಳ್ಳಿ ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ಶುಕ್ರವಾರ ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಕೋಲಾರ ಬಂದ್ ಆಚರಣೆಯ ನೆಪದಲ್ಲಿ ಕೋಲಾರ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಗೆ ನುಗ್ಗಿದ ದಲಿತ ಪರ ಸಂಘಟನೆಗಳ ಮುಖಂಡರು ಶ್ರೀಕೃಷ್ಣನ ಸಂದೇಶದ ಬ್ಯಾನರ್ ಹರಿದು ಹಾಕುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದು, ಅಂಬೇಡ್ಕರ್ ಹೆಸರಿನಲ್ಲಿಯೇ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಅಂಬೇಡ್ಕರ್ ಅವರು ಸಂವಿಧಾನದ ಮೂಲ ಆಶಯಗಳಿಗೆ ತಕ್ಕಂತೆ ನಡೆದುಕೊಂಡಿದ್ದಾರೆ. ಆದರೆ, ಅವರ ಹೆಸರು ಹೇಳಿಕೊಂಡು ಕೆಲವು ಮುಖಂಡರು ದೌರ್ಜನ್ಯ ದಬ್ಬಾಳಿಕೆಯ ಮೂಲಕ ಅಂಬೇಡ್ಕರ್ ಹೆಸರಿಗೆ ಕಳಂಕ ತರುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸಮಾಜದಲ್ಲಿ ಯಾವುದೇ ಧರ್ಮದ ಬಗ್ಗೆ ಅವಹೇಳನವಾಗಲಿ ಅವರ ಭಾವನೆಗಳಿಗೆ ಧಕ್ಕೆ ತರಬಾರದು ಎಂಬುದು ಇದ್ದರು ಅದರ ವಿರುದ್ದವಾಗಿ ನಡೆದುಕೊಂಡಿದ್ದಾರೆ. ದೇವಸ್ಥಾನಕ್ಕೆ ದಲಿತ ಪ್ರವೇಶವಾಗಬೇಕು ಎಂದು ಒತ್ತಾಯ ಮಾಡುವ ದಲಿತ ಮುಖಂಡರು ಶ್ರೀಕೃಷ್ಣನ ಪೋಟೋ ಹರಿದು ಕಾಲಿನಿಂದ ತುಳಿಯುತ್ತಾರೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕೆಲವು ದಲಿತಪರ ಸಂಘಟನೆಗಳು ಕಾಂಗ್ರೆಸ್ ಪಕ್ಷದ ಮುಖವಾಡ ಧರಿಸಿಕೊಂಡು ದೌರ್ಜನ್ಯ ದಬ್ಬಾಳಿಕೆಯ ಮೂಲಕ ಪ್ರತಿಭಟನೆ ಮಾಡುವುದು ಸರಿಯಲ್ಲ. ಅಂಬೇಡ್ಕರ್ ಅವರ ರಾಜಕೀಯ ಜೀವನದಲ್ಲಿ ಇದೇ ಕಾಂಗ್ರೆಸ್ ಪಕ್ಷವು ತೊಂದರೆ ಕೊಟ್ಟಿದೆ ಎಂಬುದನ್ನು ದೇಶದ ಜನತೆ ಮರೆತಿಲ್ಲ ಅಂಬೇಡ್ಕರ್ ಅವರ ಸಿದ್ದಾಂತಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಕೆಲವರು ಬೆಂಬಲ ಕೊಟ್ಟು ಬಂದ್ ನೆಪದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿರುವವರ ವಿರುದ್ದ ಕೂಡಲೇ ಜಿಲ್ಲಾಡಳಿತವು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…
ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…
ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…