ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪ್ರಕರಣದಲ್ಲಿ ಎರಡೂ ಕಡೆಯವರು ಪರಸ್ಪರ ಹಲ್ಲೆಯ ಆರೋಪ ಮಾಡಿದ್ದು, ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಗ್ರಾಮದ ಮಮತಾ–ದಾಳಪ್ಪ ದಂಪತಿ ಸಾಕುತ್ತಿದ್ದ ಕೋಳಿಗಳು ನೆರೆಮನೆಯ ಅಶ್ವಥಪ್ಪ ಅವರ ಮನೆಯ ಮುಂದೆ ಗಲೀಜು ಮಾಡಿದ್ದನ್ನು ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಈ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟ ನಡೆದಿದೆ.

ಈ ಘಟನೆಯಲ್ಲಿ ದಾಳಪ್ಪ ಹಾಗೂ ರವಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆಗೆ ಬಂದ ಅಶ್ವಥಪ್ಪ ಹಾಗೂ ಅವರ ಬೆಂಬಲಿಗರು ಆಸ್ಪತ್ರೆಯಲ್ಲೇ ರವಿ ಮತ್ತು ಮಮತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಳಪ್ಪ ಕುಟುಂಬದವರು ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, ಮೊದಲು ದಾಳಪ್ಪ ಹಾಗೂ ಅವರ ಕುಟುಂಬದವರು ಸೇರಿ 15ಕ್ಕೂ ಹೆಚ್ಚು ಮಂದಿ ಅಶ್ವಥಪ್ಪ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂದು ಅಶ್ವಥಪ್ಪ ಕುಟುಂಬ ಆರೋಪಿಸಿದೆ. ಹಲ್ಲೆಯಿಂದ ಅಶ್ವಥಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೂ ಅವರ ಮೇಲೆ ಮತ್ತೊಮ್ಮೆ ಹಲ್ಲೆಗೆ ಯತ್ನ ನಡೆದಿದ್ದು, ಈ ವೇಳೆ ಎರಡೂ ಗುಂಪಿನವರ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಅಶ್ವಥಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ದೊಡ್ಡಬಳ್ಳಾಪುರದ ಮಾತೋಶ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಗೆ ಉಂಟಾದ ಗಾಯಕ್ಕೆ ವೈದ್ಯರು ಒಂಬತ್ತು ಹೊಲಿಗೆ ಹಾಕಿದ್ದಾರೆ.

ಆಸ್ಪತ್ರೆಯಲ್ಲೇ ನಡೆದ ಗಲಾಟೆಯಿಂದ ರೋಗಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಗೌರಿಬಿದನೂರು ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಘಟನೆಯ ನಿಖರ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

14 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

16 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

17 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

23 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago