ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…