ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…