ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…