ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬರಿಗೆ ಏರ್ ಗನ್ ನಿಂದ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಸುಂಟಿಕೊಪ್ಪ ವ್ಯಾಪ್ತಿಯ ಗದ್ದೆಹಳ್ಳದ ನಾರ್ಗಾಣೆ ಗ್ರಾಮದ ಗಿರಿಯಪ್ಪ ಮನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಗಿರಿಯಪ್ಪನ ಮನೆ ನಿವಾಸಿ ಸುಬ್ರಮಣಿ(45) ಗಾಯಗೊಂಡವರು.
ಗದ್ದೆಹಳ್ಳ ಗಿರಿಯಪ್ಪ ಮನೆ ನಿವಾಸಿ ಶ್ರೀರಾಮ್ ಎಂಬಾತನಿಗೆ ತಮ್ಮ ಮನೆಯ ಅನತಿ ದೂರದಲ್ಲಿರುವ ಸುಬ್ರಮಣಿ ಎಂಬಾತನೊಂದಿಗೆ ಕೋಳಿ ವಿಚಾರವಾಗಿ ಜಗಳವಾಗಿದೆ. ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರುಗಿದ್ದು, ಆಕ್ರೋಶಿತನಾದ ಶ್ರೀರಾಮ್ ತನ್ನ ಮನೆಯಲ್ಲಿ ಇರಿಸಿದ್ದ ಏರ್ಗನ್ ತಂದು ಏಕಾಏಕಿ ಸುಬ್ರಮಣಿಗೆ ಹೊಟ್ಟೆಯ ಭಾಗಕ್ಕೆ ಗುಂಡು ಹಾರಿಸಿದ್ದಾನೆ.
ಗಾಯಗೊಂಡಿದ್ದ ಸುಬ್ರಮಣಿಯನ್ನು ಕೂಡಲೇ ಸ್ಥಳೀಯರು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.
ಸುಂಟಿಕೊಪ್ಪ ಪೊಲೀಸರು ಪ್ರಕರಣದ ಆರೋಪಿ ಶ್ರೀರಾಮ್ನನ್ನು ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…