Categories: ಕೋಲಾರ

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

37 minutes ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

4 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

7 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

9 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

21 hours ago