Categories: ಕೋಲಾರ

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

38 minutes ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

3 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

6 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

9 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

2 days ago