Categories: ಕೋಲಾರ

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

6 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

16 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

17 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago