Categories: ಕೋಲಾರ

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago