Categories: ಕೋಲಾರ

ಕೋಳಿ ಸಾಕಾಣಿಕೆ ಕೃಷಿಯೆಂದು ಪರಿಗಣಿಸಲು ಒತ್ತಾಯಿಸಿ ಪ್ರತಿಭಟನೆ

ಕೋಲಾರ: ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸಿ, ಕುಕ್ಕುಟ ಉದ್ಯಮದ ಸಮರ್ಪಕ ನಿರ್ವಹಣೆಗೆ ಭೂ ಕಂದಾಯ ಕಾಯ್ದೆ1964ರ ಕಾನೂನು ರೂಪಿಸಬೇಕು. ಜೊತೆಗೆ ಕೋಳಿ ಸಾಕಾಣಿಕೆ ದರ ಕೆಜಿಗೆ 12 ರೂ ಪರಿಷ್ಕರಿಸಲು ಅಗತ್ಯ ಕ್ರಮ ವಹಿಸಲು ರಾಜ್ಯ ಸರ್ಕಾರವನ್ನು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೋಮವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಸುಗಟೂರು ಶ್ರೀಧರ್ ರೆಡ್ಡಿ ಮಾತನಾಡಿ, ಕೋಳಿ ಸಾಕಾಣಿಕೆಯನ್ನು ಕೃಷಿಯೆಂದು ಪರಿಗಣಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಹಲವು ಬಾರಿ ದುಂಡು ಮೇಜಿನ ಸಭೆ. ಹೋರಾಟ ನಡೆಸಿದ್ದೇವೆ. ಕೋಳಿ ಸಾಕಾಣಿಕೆದಾರರ ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದೇವೆ ಆದರೂ ಯಾವುದೇ ರೀತಿಯ ಕ್ರಮ ವಹಿಸಿಲ್ಲ ಕೂಡಲೇ ರಾಜ್ಯ ಸರ್ಕಾರವು ಕುಕ್ಕುಟ ಉದ್ಯಮದ ಬಗ್ಗೆ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು 3 ಕೋಟಿ ಮಂದಿಗೆ ಉದ್ಯೋಗ ಅವಕಾಶಗಳನ್ನು ನೀಡಲಾಗಿದೆ ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸವನ್ನು ಆಳುವ ಸರ್ಕಾರಗಳು ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ಹಿಡಿದು ಹಿಂದೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಕುಮಾರಸ್ವಾಮಿ ಸರ್ಕಾರದವರೆಗೂ ಹಲವು ಬಾರಿ ಮನವಿ ಮಾಡಿದರೂ ಕಾನೂನು ರೂಪಿಸಿಲ್ಲ. ಬೇಡಿಕೆಗಳ ಸಂಬಂಧ ಪಶು ಸಂಗೋಪನಾ ಇಲಾಖೆ, ಕೋಳಿ ಸಾಕಾಣಿಕೆದಾರರು ಮತ್ತು ಕಂಪನಿಗಳ ನೇತೃತ್ವದಲ್ಲಿ ಸಭೆ ನಡೆದರು ಮರಿ ಸರಬರಾಜು, ಕನಿಷ್ಠ ಸಾಕಾಣಿಕೆ ದರ, ಪಾವತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋಳಿ ಸಾಕಾಣಿಕೆದಾರರ ಪರವಾಗಿ ಸಿದ್ದಪಡಿಸಿರುವ ಕರಡನ್ನು ರಾಜ್ಯ ಸರ್ಕಾರವು ಇವತ್ತಿನ ಅಧಿವೇಶನದಲ್ಲಿ ಮಂಡಿಸಬೇಕು ರೈತರ ಜೀವನೋಪಾಯವನ್ನು ರಕ್ಷಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ದ ಮಟ್ಟದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು ನಂತರ ಉಪ ತಹಶಿಲ್ದಾರ್ ಅವರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕೋಳಿ ಸಾಕಾಣಿಕೆದಾರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಅಧ್ಯಕ್ಷ ಜೆ.ಸಿ.ಮಂಜುನಾಥ್, ತಾಲೂಕು ಅಧ್ಯಕ್ಷ ವೆಂಕಟೇಶಪ್ಪ, ರಾಜ್ಯ ರೈತ ಸಂಘದ ಕಾರ್ಯಾದ್ಯಕ್ಷ ಅಬ್ಬಣಿ ಶಿವಪ್ಪ, ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ವಿ ನಾರಾಯಣರೆಡ್ಡಿ ಕೋಳಿ ಸಂಘದ ಪದಾಧಿಕಾರಿಗಳಾದ ಗಿರೀಶ್ ಗೌಡ, ಪಿ.ಶ್ರೀನಿವಾಸ್, ನಟರಾಜ್, ಕಿರಣ್, ರಮೇಶ್, ಅಂಬರೀಶ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 minutes ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

50 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

11 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago