ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 05 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9740982585, 9113880324, 9241482541, 8884554510 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…