ಕೋವಿಡ್ ಜೆಎನ್-1 ರೂಪಾಂತರಿ ತಳಿ ಉಲ್ಬಣ- ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ-ಯಾರೂ ಆತಂಕಪಡಬೇಕಾಗಿಲ್ಲ- ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ- ಡಾ. ಟಿ.ಹೆಚ್.ಅಂಜನಪ್ಪ

ಕೋವಿಡ್ ಜೆಎನ್-1 ರೂಪಾಂತರಿ ತಳಿ ದುರ್ಬಲವಾದದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಡಾ. ಟಿ.ಹೆಚ್.ಅಂಜನಪ್ಪ ಹೇಳಿದ್ದಾರೆ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಳಿಗಾಲದಲ್ಲಿ ವೈರಾಣುಗಳು ದ್ವಿಗುಣಗೊಳ್ಳುವುದು ಸಾಮಾನ್ಯ, ಪ್ರಸ್ತುತ ಕೇರಳ, ಜಪಾನ್ ನಲ್ಲಿ ಕಂಡುಬಂದಿರುವ ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ ಚಳಿಗಾಲ ಮುಕ್ತಾಯವಾದ ಮೇಲೆ ಮಾಯವಾಗಲಿದೆ. ಯಾರೂ ಅನಗತ್ಯವಾಗಿ ಭಯಪಡಬೇಕಾಗಿಲ್ಲ ಎಂದರು.

60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು, ಸರ್ಕಾರದ ಗೈಡ್ ಲೈನ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.

ಚಳಿಗಾಲದಲ್ಲಿ ಕೆಮ್ಮು, ನೆಗಡಿ, ಜ್ವರ ಸಾಮಾನ್ಯ, ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು. ಸದ್ಯ ಕರ್ನಾಟಕದಲ್ಲಿ 53 ಜನರಲ್ಲಿ 6 ಜನ ಐಸಿಯುನಲ್ಲಿದ್ದಾರೆ 8 ಜನರು ಜನರಲ್ ವಾರ್ಡ್ ನಲ್ಲಿದ್ದಾರೆ ಎಂದರು.

ನಿನ್ನೆ ಕೇರಳದಲ್ಲಿ 292 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2041 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

10 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

11 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

14 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

14 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

23 hours ago