ಕೋವಿಡ್ ಜೆಎನ್-1 ರೂಪಾಂತರಿ ತಳಿ ಉಲ್ಬಣ- ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ-ಯಾರೂ ಆತಂಕಪಡಬೇಕಾಗಿಲ್ಲ- ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ- ಡಾ. ಟಿ.ಹೆಚ್.ಅಂಜನಪ್ಪ

ಕೋವಿಡ್ ಜೆಎನ್-1 ರೂಪಾಂತರಿ ತಳಿ ದುರ್ಬಲವಾದದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಡಾ. ಟಿ.ಹೆಚ್.ಅಂಜನಪ್ಪ ಹೇಳಿದ್ದಾರೆ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಳಿಗಾಲದಲ್ಲಿ ವೈರಾಣುಗಳು ದ್ವಿಗುಣಗೊಳ್ಳುವುದು ಸಾಮಾನ್ಯ, ಪ್ರಸ್ತುತ ಕೇರಳ, ಜಪಾನ್ ನಲ್ಲಿ ಕಂಡುಬಂದಿರುವ ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ ಚಳಿಗಾಲ ಮುಕ್ತಾಯವಾದ ಮೇಲೆ ಮಾಯವಾಗಲಿದೆ. ಯಾರೂ ಅನಗತ್ಯವಾಗಿ ಭಯಪಡಬೇಕಾಗಿಲ್ಲ ಎಂದರು.

60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು, ಸರ್ಕಾರದ ಗೈಡ್ ಲೈನ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.

ಚಳಿಗಾಲದಲ್ಲಿ ಕೆಮ್ಮು, ನೆಗಡಿ, ಜ್ವರ ಸಾಮಾನ್ಯ, ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು. ಸದ್ಯ ಕರ್ನಾಟಕದಲ್ಲಿ 53 ಜನರಲ್ಲಿ 6 ಜನ ಐಸಿಯುನಲ್ಲಿದ್ದಾರೆ 8 ಜನರು ಜನರಲ್ ವಾರ್ಡ್ ನಲ್ಲಿದ್ದಾರೆ ಎಂದರು.

ನಿನ್ನೆ ಕೇರಳದಲ್ಲಿ 292 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2041 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

2 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

4 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

7 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

21 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago