ಕೋವಿಡ್ ಜೆಎನ್-1 ರೂಪಾಂತರಿ ತಳಿ ದುರ್ಬಲವಾದದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಡಾ. ಟಿ.ಹೆಚ್.ಅಂಜನಪ್ಪ ಹೇಳಿದ್ದಾರೆ
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಳಿಗಾಲದಲ್ಲಿ ವೈರಾಣುಗಳು ದ್ವಿಗುಣಗೊಳ್ಳುವುದು ಸಾಮಾನ್ಯ, ಪ್ರಸ್ತುತ ಕೇರಳ, ಜಪಾನ್ ನಲ್ಲಿ ಕಂಡುಬಂದಿರುವ ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ ಚಳಿಗಾಲ ಮುಕ್ತಾಯವಾದ ಮೇಲೆ ಮಾಯವಾಗಲಿದೆ. ಯಾರೂ ಅನಗತ್ಯವಾಗಿ ಭಯಪಡಬೇಕಾಗಿಲ್ಲ ಎಂದರು.
60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು, ಸರ್ಕಾರದ ಗೈಡ್ ಲೈನ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.
ಚಳಿಗಾಲದಲ್ಲಿ ಕೆಮ್ಮು, ನೆಗಡಿ, ಜ್ವರ ಸಾಮಾನ್ಯ, ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು. ಸದ್ಯ ಕರ್ನಾಟಕದಲ್ಲಿ 53 ಜನರಲ್ಲಿ 6 ಜನ ಐಸಿಯುನಲ್ಲಿದ್ದಾರೆ 8 ಜನರು ಜನರಲ್ ವಾರ್ಡ್ ನಲ್ಲಿದ್ದಾರೆ ಎಂದರು.
ನಿನ್ನೆ ಕೇರಳದಲ್ಲಿ 292 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2041 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…