ಕೋವಿಡ್ ಜೆಎನ್-1 ರೂಪಾಂತರಿ ತಳಿ ಉಲ್ಬಣ- ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ-ಯಾರೂ ಆತಂಕಪಡಬೇಕಾಗಿಲ್ಲ- ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ- ಡಾ. ಟಿ.ಹೆಚ್.ಅಂಜನಪ್ಪ

ಕೋವಿಡ್ ಜೆಎನ್-1 ರೂಪಾಂತರಿ ತಳಿ ದುರ್ಬಲವಾದದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಡಾ. ಟಿ.ಹೆಚ್.ಅಂಜನಪ್ಪ ಹೇಳಿದ್ದಾರೆ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಳಿಗಾಲದಲ್ಲಿ ವೈರಾಣುಗಳು ದ್ವಿಗುಣಗೊಳ್ಳುವುದು ಸಾಮಾನ್ಯ, ಪ್ರಸ್ತುತ ಕೇರಳ, ಜಪಾನ್ ನಲ್ಲಿ ಕಂಡುಬಂದಿರುವ ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ ಚಳಿಗಾಲ ಮುಕ್ತಾಯವಾದ ಮೇಲೆ ಮಾಯವಾಗಲಿದೆ. ಯಾರೂ ಅನಗತ್ಯವಾಗಿ ಭಯಪಡಬೇಕಾಗಿಲ್ಲ ಎಂದರು.

60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು, ಸರ್ಕಾರದ ಗೈಡ್ ಲೈನ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.

ಚಳಿಗಾಲದಲ್ಲಿ ಕೆಮ್ಮು, ನೆಗಡಿ, ಜ್ವರ ಸಾಮಾನ್ಯ, ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು. ಸದ್ಯ ಕರ್ನಾಟಕದಲ್ಲಿ 53 ಜನರಲ್ಲಿ 6 ಜನ ಐಸಿಯುನಲ್ಲಿದ್ದಾರೆ 8 ಜನರು ಜನರಲ್ ವಾರ್ಡ್ ನಲ್ಲಿದ್ದಾರೆ ಎಂದರು.

ನಿನ್ನೆ ಕೇರಳದಲ್ಲಿ 292 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2041 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

3 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

5 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

6 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

10 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

11 hours ago