ಕೋವಿಡ್ ಜೆಎನ್-1 ರೂಪಾಂತರಿ ತಳಿ ಉಲ್ಬಣ- ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ-ಯಾರೂ ಆತಂಕಪಡಬೇಕಾಗಿಲ್ಲ- ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ- ಡಾ. ಟಿ.ಹೆಚ್.ಅಂಜನಪ್ಪ

ಕೋವಿಡ್ ಜೆಎನ್-1 ರೂಪಾಂತರಿ ತಳಿ ದುರ್ಬಲವಾದದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಡಾ. ಟಿ.ಹೆಚ್.ಅಂಜನಪ್ಪ ಹೇಳಿದ್ದಾರೆ

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಳಿಗಾಲದಲ್ಲಿ ವೈರಾಣುಗಳು ದ್ವಿಗುಣಗೊಳ್ಳುವುದು ಸಾಮಾನ್ಯ, ಪ್ರಸ್ತುತ ಕೇರಳ, ಜಪಾನ್ ನಲ್ಲಿ ಕಂಡುಬಂದಿರುವ ರೂಪಾಂತರಿ ತಳಿ ಜೆಎನ್-1 ಸಂಕ್ರಾಂತಿವರೆಗೂ ಇರಲಿದೆ ಚಳಿಗಾಲ ಮುಕ್ತಾಯವಾದ ಮೇಲೆ ಮಾಯವಾಗಲಿದೆ. ಯಾರೂ ಅನಗತ್ಯವಾಗಿ ಭಯಪಡಬೇಕಾಗಿಲ್ಲ ಎಂದರು.

60 ವರ್ಷ ಮೇಲ್ಪಟ್ಟವರು ಮತ್ತು 3 ರಿಂದ 13 ವರ್ಷದ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹಿಂದಿನ ಅನುಭವದ ಪ್ರಕಾರ ಜನರು ಗುಂಪು ಗುಂಪಾಗಿ ಸೇರಬಾರದು, ಸರ್ಕಾರದ ಗೈಡ್ ಲೈನ್ ಪ್ರಕಾರ 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು ಎಂದರು.

ಚಳಿಗಾಲದಲ್ಲಿ ಕೆಮ್ಮು, ನೆಗಡಿ, ಜ್ವರ ಸಾಮಾನ್ಯ, ಮೂರು ದಿನಗಳವರೆಗೆ ಜ್ವರ ಇದ್ದರೆ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಲಹೆ ನೀಡಿದರು. ಸದ್ಯ ಕರ್ನಾಟಕದಲ್ಲಿ 53 ಜನರಲ್ಲಿ 6 ಜನ ಐಸಿಯುನಲ್ಲಿದ್ದಾರೆ 8 ಜನರು ಜನರಲ್ ವಾರ್ಡ್ ನಲ್ಲಿದ್ದಾರೆ ಎಂದರು.

ನಿನ್ನೆ ಕೇರಳದಲ್ಲಿ 292 ಸಕ್ರಿಯ ಪ್ರಕರಣಗಳು ಕಂಡುಬಂದಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2041 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

10 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

22 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

22 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago