ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಸೋಂಕಿನ ಕುರಿತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಲಾಯಿತು. ಇದು ಕೋವಿಡ್ ರೂಪಾಂತರಿ ಒಮಿಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಸಾರ್ವಜನಿಕರು ಆತಂಕ ಪಡುವ ಸ್ಥಿತಿ ಬಂದಿಲ್ಲವಾದರೂ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…