ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಸೋಂಕಿನ ಕುರಿತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಲಾಯಿತು. ಇದು ಕೋವಿಡ್ ರೂಪಾಂತರಿ ಒಮಿಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಸಾರ್ವಜನಿಕರು ಆತಂಕ ಪಡುವ ಸ್ಥಿತಿ ಬಂದಿಲ್ಲವಾದರೂ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು ಎಂದು ಹೇಳಿದ್ದಾರೆ.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…