ರಾಜ್ಯದಲ್ಲಿ ಹರಡುತ್ತಿರುವ ಕೋವಿಡ್ ಸೋಂಕಿನ ಕುರಿತು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಸ್ಥಿತಿ ಅವಲೋಕಿಸಲಾಯಿತು. ಇದು ಕೋವಿಡ್ ರೂಪಾಂತರಿ ಒಮಿಕ್ರಾನ್ ಜೆ.ಎನ್ 1 ತಳಿಯಾಗಿದ್ದು, ಸೌಮ್ಯ ಸ್ವಭಾವದ ಲಕ್ಷಣಗಳನ್ನ ಹೊಂದಿದೆ. ಸಾರ್ವಜನಿಕರು ಆತಂಕ ಪಡುವ ಸ್ಥಿತಿ ಬಂದಿಲ್ಲವಾದರೂ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಕ್ಕಳು, ವೃದ್ಧರಿಗೆ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಜ್ವರ, ಶೀತ, ಕೆಮ್ಮು ಕಂಡುಬಂದಿರುವ ಮಕ್ಕಳಿಗೆ ರಜೆ ನೀಡುವಂತೆ ಶಾಲೆಗಳಿಗೆ ಸೂಚನೆ ನೀಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪೊಷಕರು ಕೂಡ ಮಕ್ಕಳನ್ನ ಶಾಲೆಗೆ ಕಳುಹಿಸದೇ ಮನೆಯಲ್ಲೇ ಆರೈಕೆ ಮಾಡುವುದು ಉತ್ತಮ. ಉಸಿರಾಟದ ಸಮಸ್ಯೆ, ಹೃದಯ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಟೆಸ್ಟಿಂಗ್ ನಡೆಸಲಾಗುತ್ತಿದ್ದು, 5 ಸಾವಿರ RTPCR ಟೆಸ್ಟಿಂಗ್ ಕಿಟ್ ಗಳನ್ನ ರಾಜ್ಯಾದ್ಯಂತ ಆಸ್ಪತ್ರೆಗಳಿಗೆ ವಿತರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೆಮ್ಡಿಸೀವರ್ ಇಂಜೆಕ್ಷನ್ ಅನ್ನು ಕೂಡಾ ಖರೀದಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಗರ್ಭೀಣಿಯರು, 50 ವರ್ಷ ಮೇಲ್ಪಟ್ಟ ವಯಸ್ಕರು ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ. ಸಿಎಂ ಅವರ ಸೂಚನೆಯಂತೆ ಕೋವಿಡ್ ಎದುರಿಸಲು ಆರೋಗ್ಯ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಕೋವಿಡ್ ಸಹಾಯವಾಣಿಯನ್ನ ತೆರೆಯಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…