Categories: ಕೋಲಾರ

ಕೋವಿಡ್ ಲಸಿಕೆಗೆ ಮುಗಿಬಿದ್ದ ಜನ ಹಸುಗಳಿಗೆ ಲಸಿಕೆ ಹಾಕಿಸಲು ಏಕೆ ಇಷ್ಟು ನಿರ್ಲಕ್ಷ್ಯ- ಡಾ ಮಹೇಶ್

ಕೋಲಾರ: ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಸಂದರ್ಭದಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ರಾಸುಗಳಿಗೆ ಆರೋಗ್ಯದ ದೃಷ್ಟಿಯಿಂದ ಲಸಿಕೆ ಹಾಕಿಸಲು ನಿರ್ಲಕ್ಷ್ಯ ವಹಿಸುತ್ತಾರೆ ಇದರಿಂದಲೇ ರಾಸುಗಳಿಗೆ ಹೆಚ್ಚಿನ ರೋಗಲು ಹರಡುತ್ತವೆ ಕೂಡಲೇ ಕಡ್ಡಾಯವಾಗಿ ಲಸಿಕೆ ಹಾಕಿಸುವುದು ಉತ್ಪಾದಕರ ಜವಾಬ್ದಾರಿಯಾಗಬೇಕು ಎಂದು ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್ ತಿಳಿಸಿದರು,

ತಾಲೂಕಿನ ಕೊಂಡರಾಜನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಸಭೆಯನ್ನು ಉದ್ವಾಟಿಸಿ ಮಾತನಾಡಿದ ಅವರು, ರಾಸುಗಳಿಗೆ ಹವಾಮಾನದ ವೈಪರೀತ್ಯದಿಂದ ಒಂದಲ್ಲ ಒಂದು ರೋಗಗಳು ಕಾಣಿಸಿಕೊಳ್ಳುತ್ತವೆ ಉತ್ಪಾದಕರಿಗೆ ಹಸು ಸಾಕಾಣಿಕೆ ತುಂಬಾ ಕಷ್ಟವಾಗಿದೆ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿ ಜೊತೆಗೆ ಹಾಲಿನ ಉತ್ಪಾದನೆ ಮತ್ತು ಗುಣಮಟ್ಟಕ್ಕೆ ಹೆಚ್ಚಿನ ಅಧ್ಯತೆ ನೀಡಬೇಕು ಎಂದರು.

ಸಂಘದ ಅಧ್ಯಕ್ಷ ಹೆಚ್ ನಾಗರಾಜ್ ಮಾತನಾಡಿ ಪ್ರತಿ ವರ್ಷವೂ ನಷ್ಟದಲ್ಲಿ ನಡೆಯುತ್ತಿತ್ತು ಈ ಬಾರಿ 24,393 ರೂ, ಲಾಭ ಗಳಿಸಿದ್ದೇವೆ ಮುಂದೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಇದಕ್ಕೆ ಸಮಿತಿಯ ನಿರ್ದೇಶಕರು, ಹಾಲು ಉತ್ಪಾದಕರು, ಮತ್ತು ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಮುಂದೆ ಮಾದರಿ ಡೇರಿಯಾಗಿ ರೂಪಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೊಂಡರಾಜನಹಳ್ಳಿ ಗ್ರಾಪಂ ಅಧ್ಯಕ್ಷ ವಿಜಯನಗರ ಮಂಜುನಾಥ್ ಮಾತನಾಡಿ, ಗ್ರಾಪಂ ಕೇಂದ್ರದಲ್ಲಿಯೇ ಹಾಲು ಉತ್ಪಾದನೆ ಕಡಿಮೆ ಇದ್ದು
ಹಾಲು ಉತ್ಪಾದಕರನ್ನು ಉತ್ತೇಜಿಸಲು ಸರಕಾರ ಪ್ರೋತ್ಸಾಹಧನ ನೀಡುತ್ತಿದೆ ರೈತರು ಗುಣಮಟ್ಟದ ಹಾಲನ್ನು ಸಂಘಕ್ಕೆ ಸರಬರಾಜು ಮಾಡುವ ಮೂಲಕ ಹೆಚ್ಚಿನ ಲಾಭ ಪಡೆಯಬೇಕು ಗ್ರಾಮ ಪಂಚಾಯತಿ ವತಿಯಿಂದ ಅಗತ್ಯ ಮಾರ್ಗದರ್ಶನ ಮತ್ತು ಸೌಲಭ್ಯಗಳನ್ನು ನೀಡಲು ಸದಾಸಿದ್ದ ಎಂದರು.

ಈ ಸಂದರ್ಭದಲ್ಲಿ ಕೋಮುಲ್ ವಿಸ್ತಾರಣಾಧಿಕಾರಿಗಳಾದ ಎಸ್.ನಾಗಪ್ಪ, ಎ.ಮಂಜುಳ, ಪಿಡಿಒ ಮಂಜುನಾಥ್ ಪ್ರಸಾದ್, ಮಾತನಾಡಿದರು, ಸಭೆಯಲ್ಲಿ ಗ್ರಾಪಂ ಸದಸ್ಯರಾದ ಶ್ರೀನಿವಾಸ ಯಾದವ್, ಸುಬ್ಬರಾಮಪ್ಪ, ಡೇರಿ ಉಪಾಧ್ಯಕ್ಷ ಕೆ.ವಿ ಮಂಜುನಾಥ್, ನಿರ್ದೇಶಕರಾದ ಶಂಕರಪ್ಪ, ಎಂ.ನಾರಾಯಣಸ್ವಾಮಿ. ಮುರಳಿಬಾಬು, ನಂದಕುಮಾರ್, ಸಿ.ನಾರಾಯಣಸ್ವಾಮಿ, ವೆಂಕಟಲಕ್ಷ್ಮೀ, ಕಾರ್ಯದರ್ಶಿ ಗಂಗಾಧರ್, ಸಹಾಯಕ ನಾರಾಯಣಪ್ಪ ಮುಖಂಡರಾದ ಕೋರ್ಟ್ ನಾಗಪ್ಪ, ಶ್ರೀಕಾಂತ್ ಯಾದವ್, ಹಾಲು ಉತ್ಪಾದಕರು, ಗ್ರಾಮಸ್ಥರು ಇದ್ದು ಕಾರ್ಯಕ್ರಮವನ್ನು ಕೊಂಡರಾಜನಹಳ್ಳಿ ಮಂಜುಳ ನಿರೂಪಿಸಿದರು,

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

29 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

13 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

16 hours ago