Categories: ಆರೋಗ್ಯ

ಕೋವಿಡ್‌ ಸೋಂಕಿನ ಬಳಿಕ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ಮೂಲದ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ಮೆಂಟ್ ಸರ್ಜರಿ

ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್‌ ಸಹಾಯದ ಮೂಲಕ “ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್‌ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್‌ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್‌ ಸಹಾಯದಿಂದ ಅವರಿಗೆ ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು.

ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು,
ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ.

ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ. ಎಂದು ಹೇಳಿದರು

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

9 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

10 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

11 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

11 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

15 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

22 hours ago