Categories: ಆರೋಗ್ಯ

ಕೋವಿಡ್‌ ಸೋಂಕಿನ ಬಳಿಕ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ಮೂಲದ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ಮೆಂಟ್ ಸರ್ಜರಿ

ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್‌ ಸಹಾಯದ ಮೂಲಕ “ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್‌ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್‌ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್‌ ಸಹಾಯದಿಂದ ಅವರಿಗೆ ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು.

ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು,
ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ.

ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ. ಎಂದು ಹೇಳಿದರು

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

8 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

20 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

21 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

22 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

22 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago