Categories: ಆರೋಗ್ಯ

ಕೋವಿಡ್‌ ಸೋಂಕಿನ ಬಳಿಕ ಸೊಂಟದ ಸಂಧಿವಾತ ಸಮಸ್ಯೆಗೆ ಒಳಗಾಗಿದ್ದ ಮಲೇಷ್ಯಾ ಮೂಲದ ವ್ಯಕ್ತಿಗೆ ಯಶಸ್ವಿ ರೊಬೋಟಿಕ್‌ ಹಿಪ್ ರಿಪ್ಲೇಸ್‌ಮೆಂಟ್ ಸರ್ಜರಿ

ಬೆಂಗಳೂರು: ದೀರ್ಘಕಾಲದ ಸೊಂಟ ನೋವಿನಿಂದ ಬಳಲುತ್ತಿದ್ದ ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್‌ ಸಹಾಯದ ಮೂಲಕ “ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆ.ಸಲಾಯಿತು.

ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯ ಮೂಳೆಚಿಕಿತ್ಸಾ ವಿಭಾಗದ ಪ್ರಧಾನ ನಿರ್ದೇಶಕ ನಾರಾಯಣ್ ಹುಲ್ಸೆ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆ ಬಳಿಕವೇ ರೋಗಿಯು ನಡೆಯಲು ಸಶಕ್ತರಾಗಿದ್ದರು. ಈ ಕುರಿತು ಮಾತನಾಡಿದ ಡಾ. ನಾರಾಯಣ್‌ ಹುಲ್ಸೆ, ಮಲ್ಲೇಷ್ಯಾ ಮೂಲದ 53 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದ ರೋಗಿಯು ಮೂರು ವರ್ಷದ ಹಿಂದೆ ಕೋವಿಡ್‌ ಸೋಂಕಿಗೆ ಒಳಗಾಗಿ, ಅದರ ಅಡ್ಡಪರಿಣಾಮದಿಂದ ಅವಾಸ್ಕುಲರ್ ನೆಕ್ರೋಸಿಸ್ (AVN) ಗೆ ಒಳಗಾಗಿ, ದೀರ್ಘಕಾಲದ ಸೊಂಟದ ನೋವಿನಿಂದ ಬಳಲುತ್ತಿದ್ದರು. ವಿಶ್ವಾದ್ಯಂತ ಅನೇಕ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರೂ ಎಲ್ಲಿಯೂ ಸಫಲ ಕಾಣಲಿಲ್ಲ, ಅಷ್ಟೆ ಅಲ್ಲದೆ, ಎರಡು ವಿಫಲ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಬಳಿಕ ಅವರು ಫೋರ್ಟಿಸ್ ಆಸ್ಪತ್ರೆಗೆ ದಾಖಲಾದರು. ಇಲ್ಲಿ ನಮ್ಮ ತಂಡ ಅವರನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿದ ಬಳಿಕ ಅವರು ಎರಡೂ ಭಾಗದಲ್ಲೂ ಸೊಂಟ ಸರಿಪಡಿಸುವ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ನಿರ್ಧರಿಸಲಾಯಿತು, ಅತ್ಯಾಧುನಿಕ ರೋಬೋಟ್‌ ಸಹಾಯದಿಂದ ಅವರಿಗೆ ಹಿಪ್‌ ಬದಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಯಿತು.

ರೋಗಿಯು ಶಸ್ತ್ರಚಿಕಿತ್ಸೆಗೆ ಒಳಗಾದ ಅದೇ ದಿನವೇ ನಡೆದಾಡಲು ಸಾಧ್ಯವಾಯಿತು ಎಂದು ವಿವರಿಸದರು,
ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್ಸ್‌ನ ಬಿಸಿನೆಸ್ ಹೆಡ್ ಶ್ರೀ ಅಕ್ಷಯ್ ಒಲೇಟಿ, “ಫೋರ್ಟಿಸ್‌ನಲ್ಲಿ, ಇತ್ತೀಚಿನ ರೊಬೊಟಿಕ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಅತ್ಯಾಧುನಿಕ ಚಿಕಿತ್ಸೆಯನ್ನು ಒದಗಿಸಲು ನಾವು ಹೆಮ್ಮೆಪಡುತ್ತೇವೆ. ಇದು ಹೆಚ್ಚು ನಿಖರವಾದ, ಕನಿಷ್ಠ ಆಕ್ರಮಣಕಾರಿ ಶಸ್ತ್ರಚಿಕಿತ್ಸೆಗಳನ್ನು ನೀಡಲು ನಮಗೆ ಅನುವು ಮಾಡಿಕೊಡುತ್ತದೆ, ಇದು ವೇಗವಾಗಿ ಚೇತರಿಸಿಕೊಳ್ಳಲು ಮತ್ತು ಉತ್ತಮ ಒಟ್ಟಾರೆ ರೋಗಿಯ ಅನುಭವವನ್ನು ಉತ್ತೇಜಿಸುತ್ತದೆ.

ನಮ್ಮ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸಲು ನವೀನ ತಂತ್ರಜ್ಞಾನಗಳನ್ನು ನಿರಂತರವಾಗಿ ಸಂಯೋಜಿಸಲು ನಾವು ಬದ್ಧರಾಗಿದ್ದೇವೆ. ಎಂದು ಹೇಳಿದರು

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago