ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್.ಅನುರಾಧ ಅವರ ಜಂಟಿ ಅಧ್ಯಕ್ಷತೆಯಲ್ಲಿ ಕೋವಿಡ್-19 ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಯಲು ಅಗತ್ಯ ಕ್ರಮ ಗಳನ್ನು ಕೈಗೊಂಡು, ಕೋವಿಡ್-19 ಮಾರ್ಗಸೂಚಿಗಳನ್ನು ಸಾರ್ವಜನಿಕರು ಪಾಲಿಸಲು ಸೂಕ್ತ ಮಾರ್ಗದರ್ಶನ ನೀಡಲು ಸೂಚಿಸಲಾಯಿತು.
ಕೋವಿಡ್-19 ಪರೀಕ್ಷೆಯ ಮಾದರಿಗಳನ್ನು ಸಂಗ್ರಹಿಸಿ ಗುರಿ ಸಾಧಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಲಾಯಿತು. ಎಲ್ಲಾ SARI (Severe Acute Respiratory Infection) ಪ್ರಕರಣಗಳು ಹಾಗೂ 20 ILI ( influenza like illness) ಪ್ರಕರಣಗಳ ಪೈಕಿ 1 ILI ಪ್ರಕರಣವನ್ನು ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಯಿತು.
ಕೋವಿಡ್ -19 ಸೋಂಕು ಹರಡದಂತೆ ಪರಿಷ್ಕರಿಸ್ಪಟ್ಟ(revised) ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಯಿತು.
60 ವರ್ಷಕ್ಕಿಂತ ಮೇಲ್ಪಟ್ಟ ವರು, ಗರ್ಭಿಣಿಯರು ಮತ್ತು ಇತರೆ CO-MORBID, ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಇತರೆ ತೊಂದರೆಗಳಿರುವವರು ಕೋವಿಡ್-19 ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಸರಬರಾಜು ಮತ್ತು ಕೋವಿಡ್-19 ಚಿಕಿತ್ಸೆಗೆ ಅವಶ್ಯಕತೆ ಇರುವ ತುರ್ತು ಔಷಧಿಗಳನ್ನು ದಾಸ್ತಾನು ಇಡಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಎಂ. ಸಿ. ಸುನಿಲ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ, ಡಾ.ಮುರಳಿ ಮೋಹನ್, ಎಲ್ಲಾ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…