ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ.
2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು, ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.
ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour-CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…