ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ.
2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು, ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.
ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour-CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…
ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…
ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…