ಕಳೆದ 20 ದಿನಗಳ ಅವಧಿಯಲ್ಲಿ ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ.
2025ನೇ ಸಾಲಿನಲ್ಲಿ ಈವರೆಗೆ ಯಾವುದೇ ಕೋವಿಡ್ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ, ಕೋವಿಡ್-19 ಪರಿಸ್ಥಿತಿಯು ಹತೋಟಿಯಲ್ಲಿದ್ದು, ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯನ್ನು ವಹಿಸುವುದು ಅಗತ್ಯವಾಗಿದೆ.
ಆದಾಗ್ಯೂ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗರ್ಭಿಣಿಯರು, ಮಕ್ಕಳು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತವಾಗಿದೆ. ಕೋವಿಡ್ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ (Covid Appropriate Behaviour-CAB) ಕೈಗಳ ಸ್ವಚ್ಛತೆ, ಹ್ಯಾಂಡ್ ಸ್ಯಾನಿಟೈಸರ್ ನ ಬಳಕೆ ಇತ್ಯಾದಿಗಳನ್ನು ಪಾಲಿಸುವುದು ಅಗತ್ಯವಾಗಿದೆ.
Severe Acute Respiratory Illness (SARI) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್ – 19 ಪರೀಕ್ಷೆಗೆ ಒಳಪಡುವುದರಿಂದ, ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…