ಕೋವಿಡ್- 19 ರಿಟರ್ನ್ಸ್: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್: ಕೋವಿಡ್ ಸೂಚನೆಗಳ ಜಾರಿ

ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿ, ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದು ಈ ಕೆಳಗಿನ ಸೂಚನೆಗಳನ್ನು ನೀಡಿದರು.

* ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

* ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.

* ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.

* ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

* ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

* ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.

* ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

* ಕಳೆದ ಜನವರಿಯಿಂದಲೂ
ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

* ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.

* ರಾಜ್ಯದಲ್ಲಿ ಕೊರೊನಾ ಹರಡದಂತೆ
ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

* ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

* ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭಿಸಬೇಕು.

* ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ
ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಬೇಕು.

* ಕೊರೊನಾ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರಬೇಕು.

* ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು.

* ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು.

* ಸಾಮಾಜಿಕ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

39 minutes ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

11 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

12 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

17 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

19 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

22 hours ago