ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ತಂಗಿಯನ್ನ ಚಾಕುವಿನಿಂದ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜಿ.ಜಿ. ಪೇಟೆಯಲ್ಲಿ ನಡೆದಿದೆ.
ಹತ್ಯೆಗೀಡಾದವರನ್ನು ರೇಷ್ಮಾ (21) ಮತ್ತು ಶಮಾ (25) ಎಂದು ಗುರುತಿಸಲಾಗಿದೆ. ಶಮಾ ತನ್ನ ಪತಿ ಏಜಾಜ್ನೊಂದಿಗೆ ಉಂಟಾಗಿದ್ದ ವೈಮನಸ್ಸಿನ ಹಿನ್ನೆಲೆಯಲ್ಲಿ ಮನೆ ಬಿಟ್ಟು ತಂಗಿ ರೇಷ್ಮಾ ಅವರೊಂದಿಗೆ ಚಿಂತಾಮಣಿಯ ಜಿ.ಜಿ. ಪೇಟೆಯಲ್ಲಿ ವಾಸವಾಗಿದ್ದರು.
ಕಳೆದ ಮೂರು ತಿಂಗಳಿಂದ ದಂಪತಿಯನ್ನು ರಾಜಿ ಮಾಡಿಸಲು ಪಂಚಾಯಿತಿಗಳು ನಡೆದಿದ್ದರೂ, ಪತ್ನಿ ಪತಿಯೊಂದಿಗೆ ಮರಳಲು ನಿರಾಕರಿಸಿದ್ದರಿಂದ ಆರೋಪಿ ಏಜಾಜ್ ಆಕ್ರೋಶಗೊಂಡಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಆತ ಮನೆಗೆ ಬಂದು ಪತ್ನಿ ಶಮಾ ಹಾಗೂ ಆಕೆಯ ತಂಗಿ ರೇಷ್ಮಾಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯ ಬಳಿಕ ಏಜಾಜ್ ಮೂವರು ಮಕ್ಕಳನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದು, ನಂತರ ಕೋಲಾರದ ಗಲ್ಪೇಟೆ ಪೊಲೀಸ್ ಠಾಣೆಗೆ ಹತ್ಯೆಗೆ ಬಳಸಿದ ಚಾಕುವಿನೊಂದಿಗೆ ಶರಣಾಗಿದ್ದಾನೆ. ಆರೋಪಿ ಕೋಲಾರ ನಗರದ ಗಲ್ಪೇಟೆ ನಿವಾಸಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…