ಕೌಟುಂಬಿಕ ಕಲಹ: ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನ: ವಿಷಯ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ ಪೊಲೀಸರು: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುದ್ದಿ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯನ್ನ ಪತ್ತೆ ಮಾಡಿದ ಪೊಲೀಸರು ಆತನ ಜೀವ ಕಾಪಾಡಿರುವ ಘಟನೆ ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲ್ (27) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ASI ನಾಗೇಶ್ ಮತ್ತು APC ಸಂಜೀವ್ ಕುಮಾರ್ ರವರು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ.

ವ್ಯಕ್ತಿಯ ಜೀವ ರಕ್ಷಣೆ ಮಾಡುವ ವೇಳೆ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅದ್ದಿಗಾನಹಳ್ಳಿಯ ನಿವಾಸಿ ಗೋಪಾಲ್ ನಿನ್ನೆ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ. ಸಾಯುವ ಮುನ್ನ ಆತ ತನ್ನ ತಂಗಿ ಲತಾಗೆ ಫೋನ್ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ. ತಕ್ಷಣವೇ ಆಕೆ 112 ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಗೋಪಾಲ್ ಪತ್ತೆಗೆ ಮುಂದಾದ ರಾಜಾನುಕುಂಟೆ ಪೊಲೀಸರು ಆತನ ಮೊಬೈಲ್ ಲೋಕೇಷನ್ ಪತ್ತೆ ಮಾಡಿ ಸ್ಥಳಕ್ಕೆ ಹೋಗಿದ್ದಾರೆ. ಪೊಲೀಸರನ್ನ ಕಂಡ ಆತ ರೈಲ್ವೆ ಟ್ರ್ಯಾಕ್‌ ಮೇಲೆ ಓಡಲು ಪ್ರಾರಂಭಿಸಿದ್ದಾನೆ. ಆತನ ಬೆನ್ನತ್ತಿದ ಪೊಲೀಸರು ಆತ್ಮಹತ್ಯೆ ಯತ್ನ ತಡೆದಿದ್ದಾರೆ.

ರಾಜಾನುಕುಂಟೆ ಪೊಲೀಸ್ ಠಾಣೆಗೆ ಕರೆತಂದು ಆರೈಕೆ ಮಾಡಿ ನಂತರ ಅವರಿಗೆ ಧೈರ್ಯ ತುಂಬಿ ಕುಟುಂಬದವರಿಗೆ ಒಪ್ಪಿಸಿ ಸಮಯ ಪ್ರಜ್ಞೆ ಮೆರೆದಿರುತ್ತಾರೆ.

ಪೊಲೀಸರು ಸಕಾಲಕ್ಕೆ ಧಾವಿಸಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದು, ಎರಡು ನಿಮಿಷ ತಡವಾಗಿದ್ದಲ್ಲಿ, ಇದೇ ಮಾರ್ಗದಲ್ಲಿ ಹಾದು ಹೋದ ರೈಲಿಗೆ ಆತ ಬಲಿಯಾಗುತ್ತಿದ್ದ ಎನ್ನಲಾಗಿದೆ.

Ramesh Babu

Journalist

Recent Posts

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

3 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

3 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

3 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

5 hours ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

5 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

10 hours ago