ಕೌಟುಂಬಿಕ ಕಲಹ: ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನ: ವಿಷಯ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ ಪೊಲೀಸರು: ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸುದ್ದಿ ತಿಳಿದ 20 ನಿಮಿಷದಲ್ಲಿ ವ್ಯಕ್ತಿಯನ್ನ ಪತ್ತೆ ಮಾಡಿದ ಪೊಲೀಸರು ಆತನ ಜೀವ ಕಾಪಾಡಿರುವ ಘಟನೆ ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯಲಹಂಕ ತಾಲೂಕು ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲ್ (27) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದು, ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ASI ನಾಗೇಶ್ ಮತ್ತು APC ಸಂಜೀವ್ ಕುಮಾರ್ ರವರು ಆತ್ಮಹತ್ಯೆಗೆ ಮುಂದಾಗಿದ್ದ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದಾರೆ.

ವ್ಯಕ್ತಿಯ ಜೀವ ರಕ್ಷಣೆ ಮಾಡುವ ವೇಳೆ ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅದ್ದಿಗಾನಹಳ್ಳಿಯ ನಿವಾಸಿ ಗೋಪಾಲ್ ನಿನ್ನೆ ರಾತ್ರಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ. ಸಾಯುವ ಮುನ್ನ ಆತ ತನ್ನ ತಂಗಿ ಲತಾಗೆ ಫೋನ್ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ. ತಕ್ಷಣವೇ ಆಕೆ 112 ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ಗೋಪಾಲ್ ಪತ್ತೆಗೆ ಮುಂದಾದ ರಾಜಾನುಕುಂಟೆ ಪೊಲೀಸರು ಆತನ ಮೊಬೈಲ್ ಲೋಕೇಷನ್ ಪತ್ತೆ ಮಾಡಿ ಸ್ಥಳಕ್ಕೆ ಹೋಗಿದ್ದಾರೆ. ಪೊಲೀಸರನ್ನ ಕಂಡ ಆತ ರೈಲ್ವೆ ಟ್ರ್ಯಾಕ್‌ ಮೇಲೆ ಓಡಲು ಪ್ರಾರಂಭಿಸಿದ್ದಾನೆ. ಆತನ ಬೆನ್ನತ್ತಿದ ಪೊಲೀಸರು ಆತ್ಮಹತ್ಯೆ ಯತ್ನ ತಡೆದಿದ್ದಾರೆ.

ರಾಜಾನುಕುಂಟೆ ಪೊಲೀಸ್ ಠಾಣೆಗೆ ಕರೆತಂದು ಆರೈಕೆ ಮಾಡಿ ನಂತರ ಅವರಿಗೆ ಧೈರ್ಯ ತುಂಬಿ ಕುಟುಂಬದವರಿಗೆ ಒಪ್ಪಿಸಿ ಸಮಯ ಪ್ರಜ್ಞೆ ಮೆರೆದಿರುತ್ತಾರೆ.

ಪೊಲೀಸರು ಸಕಾಲಕ್ಕೆ ಧಾವಿಸಿ ವ್ಯಕ್ತಿಯ ಜೀವ ರಕ್ಷಣೆ ಮಾಡಿದ್ದು, ಎರಡು ನಿಮಿಷ ತಡವಾಗಿದ್ದಲ್ಲಿ, ಇದೇ ಮಾರ್ಗದಲ್ಲಿ ಹಾದು ಹೋದ ರೈಲಿಗೆ ಆತ ಬಲಿಯಾಗುತ್ತಿದ್ದ ಎನ್ನಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago