ಯುಗಾದಿ ಹಬ್ಬದ ದಿನವೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ವೀರಾಪುರ ಗ್ರಾಮದ ನಿವಾಸಿ ಸುಮಾರು 40 ವರ್ಷದ ವಾಸು ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದುರ್ದೈವಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಕುಡಿತದ ನಶೆಯಲ್ಲಿ ನಾನು ಸಾಯುತ್ತೇನೆ ಎಂದು ಕಾಳು ಮಾತ್ರಿ ಕೈಯಲ್ಲಿ ಹಿಡಿದು ಎಲ್ಲರಿಗೂ ಹೇಳಿಕೊಂಡು ತಿರುಗಾಡುತ್ತಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.
ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಗಂಡ ಹೆಂಡತಿ ಜಗಳ ಮೂರು ದಿನಗಳ ಹಿಂದೆಯಷ್ಟೇ ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ಇಬ್ಬರನ್ನು ಕರೆಸಿ ಬುದ್ದಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ.
ಆದರೆ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…