ಯುಗಾದಿ ಹಬ್ಬದ ದಿನವೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ವೀರಾಪುರ ಗ್ರಾಮದ ನಿವಾಸಿ ಸುಮಾರು 40 ವರ್ಷದ ವಾಸು ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದುರ್ದೈವಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಕುಡಿತದ ನಶೆಯಲ್ಲಿ ನಾನು ಸಾಯುತ್ತೇನೆ ಎಂದು ಕಾಳು ಮಾತ್ರಿ ಕೈಯಲ್ಲಿ ಹಿಡಿದು ಎಲ್ಲರಿಗೂ ಹೇಳಿಕೊಂಡು ತಿರುಗಾಡುತ್ತಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.
ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಗಂಡ ಹೆಂಡತಿ ಜಗಳ ಮೂರು ದಿನಗಳ ಹಿಂದೆಯಷ್ಟೇ ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ಇಬ್ಬರನ್ನು ಕರೆಸಿ ಬುದ್ದಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ.
ಆದರೆ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…