ಯುಗಾದಿ ಹಬ್ಬದ ದಿನವೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ವೀರಾಪುರ ಗ್ರಾಮದ ನಿವಾಸಿ ಸುಮಾರು 40 ವರ್ಷದ ವಾಸು ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆ ನೇಣಿಗೆ ಶರಣಾಗಿರಬಹುದು ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೃತ ದುರ್ದೈವಿಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಕುಡಿತದ ನಶೆಯಲ್ಲಿ ನಾನು ಸಾಯುತ್ತೇನೆ ಎಂದು ಕಾಳು ಮಾತ್ರಿ ಕೈಯಲ್ಲಿ ಹಿಡಿದು ಎಲ್ಲರಿಗೂ ಹೇಳಿಕೊಂಡು ತಿರುಗಾಡುತ್ತಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ.
ಕ್ಷುಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು, ಗಂಡ ಹೆಂಡತಿ ಜಗಳ ಮೂರು ದಿನಗಳ ಹಿಂದೆಯಷ್ಟೇ ಪೊಲೀಸ್ ಠಾಣೆಗೆ ಹೋಗಿದ್ದು, ಪೊಲೀಸರು ಇಬ್ಬರನ್ನು ಕರೆಸಿ ಬುದ್ದಿವಾದ ಹೇಳಿ ಕಳಿಸಿದ್ದರು ಎಂದು ತಿಳಿದುಬಂದಿದೆ.
ಆದರೆ, ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…