ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆಯುವವರ ಸಂಖ್ಯೆ ಹೆಚ್ಚಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಸೂಚನೆ

ಕೌಶಲ್ಯ ಕರ್ನಾಟಕ ಯೋಜನೆ‌‌ಯಡಿ ತರಬೇತಿಗಾಗಿ ನೊಂದಣಿಯಾಗಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದು, ತರಬೇತಿ ಪಡೆದುಕೊಂಡಿರುವವರ ಸಂಖ್ಯೆ ಕ್ಷೀಣಿಸಿರುವ ಹಿನ್ನೆಲೆ, ನೋಂದಾಯಿತ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಮೂಲಕ ತರಬೇತಿ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚಿಸಲು ಕಟ್ಟುನಿಟ್ಟಿನ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ತರಬೇತಿ ಪಡೆದುಕೊಳ್ಳಲು ಒಟ್ಟು 15,063 ಅಭ್ಯರ್ಥಿಗಳು ನೊಂದಾಯಿಸಿದ್ದಾರೆ. ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಹೆಚ್ಚಾಗುತ್ತಿದ್ದು, ವಿವಿಧ ವೃತ್ತಿಪರ ತರಬೇತಿಗಳನ್ನು ನೀಡಿದಾಗ ಮಾತ್ರ ಉದ್ಯೋಗ ಕಲ್ಪಿಸಿಕೊಟ್ಟಂತಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿ ನೀಡಲು ಸಮರ್ಪಕ ತರಬೇತಿ ಕೇಂದ್ರಗಳ ಅವಶ್ಯಕತೆ ಇದ್ದು, ತರಬೇತಿ ಕೇಂದ್ರಗಳನ್ನು ಗುರುತಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 22 ಐ.ಟಿ.ಐ ಸಂಸ್ಥೆಗಳಿದ್ದು, ಈ ಪೈಕಿ 5 ಸರ್ಕಾರಿ ಐಟಿಐ ಸಂಸ್ಥೆಗಳು ಹಾಗೂ 17 ಖಾಸಗಿ ಐ.ಟಿ.ಐ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಸಿಬ್ಬಂದಿ ಕೊರತೆಯಿಂದ ಸಂಸ್ಥೆಗಳಲ್ಲಿ ತರಬೇತಿ ಕಾರ್ಯ ಪ್ರಗತಿಯಲ್ಲಿರದ ಹಿನ್ನೆಲೆ, ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ವಹಿಸಿ ಐಟಿಐ ಸಂಸ್ಥೆಗಳಲ್ಲಿ ತರಬೇತಿ ನೀಡಲು ಕ್ರಮವಹಿಸಲಾಗುವುದು ಎಂದರು.

ಕೈಗಾರಿಕಾ ಸಂಸ್ಥೆಗಳ ಜೊತೆ ಚರ್ಚಿಸಿ ಅವಶ್ಯವಿರುವ ಕಡೆ ತರಬೇತಿಯನ್ನು ಕಲ್ಪಿಸಿ, ಉದ್ಯೋಗ ದೊರಕಿಸಿಕೊಡುವ ಪ್ರಯತ್ನ ಮಾಡಬೇಕು ಎಂದರಲ್ಲದೆ, ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ತರಬೇತಿ ಸಂಸ್ಥೆಗಳು ತರಬೇತಿಗಾಗಿ ರಚಿಸಿರುವ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿ, ಕೌಶಲ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಕೃಷಿ, ಕೈಗಾರಿಕೆ, ಸಮಾಜ ಕಲ್ಯಾಣ, ಪಶು ಸಂಗೋಪನೆ ಹಾಗೂ ಇನ್ನಿತರ ಇಲಾಖೆಗಳು ವಿವಿಧ ತರಬೇತಿಗಳನ್ನು ನೀಡುತ್ತಿದ್ದು, ಕೌಶಲ್ಯ ಕರ್ನಾಟಕ ಯೋಜನೆಯಡಿ ಮತ್ತಷ್ಟು ತರಬೇತಿಗಳನ್ನು ನೀಡಿ ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಪ್ರತಿಯೊಂದು ಇಲಾಖೆಯ ಸಮನ್ವಯತೆ, ಸಹಕಾರದಿಂದ ಈ ಯೋಜನೆ ಯಶಸ್ವಿ ಆಗಲು ಸಾಧ್ಯವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ತರಬೇತಿ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

46 minutes ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

5 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

10 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

11 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

12 hours ago