Categories: ವೈರಲ್

ಕ್ಯಾನ್ಸರ್​ನಿಂದ ಚೇತರಿಸಿಕೊಂಡ ನಟ ಶಿವಣ್ಣ: ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಗೆ ಎಂಟ್ರಿ: ಶಿವಣ್ಣನ ಹೊಸ ಲುಕ್ ಫುಲ್ ವೈರಲ್

ನಟ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ವಿಗ್ ಧರಿಸಿ ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಶಿವಣ್ಣನ ಹೊಸ ಲುಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.

ಮಿಯಾಮಿಯಲ್ಲಿ ಚಿಕಿತ್ಸೆ ಪಡೆದ ನಂತರ, ಅವರು ಹೊಸ ಚಿತ್ರದ ಶೂಟಿಂಗ್ ಆರಂಭಿಸಿದ್ದಾರೆ. ಇದು ರಾಮ್ ಚರಣ್ ನಟನೆಯ “ಆರ್‌ಸಿ 16” ಎಂದು ಹೇಳಲಾಗುತ್ತಿದೆ.

ಶಿವರಾಜ್​ಕುಮಾರ್ ಅವರು ಕಿಮೋ ಥೆರೆಪಿ ಕಾರಣದಿಂದ ಕೂದಲು ತೆಗೆಸಿಕೊಳ್ಳಬೇಕಿತ್ತು. ಇದೇ ಸಂದರ್ಭದಲ್ಲಿ ಅವರು ತಿರುಪತಿಗೆ ತೆರಳಿದ್ದರಿಂದ ಅಲ್ಲಿ ಅವರು ಮುಡಿಕೊಟ್ಟಿದ್ದರು. ಇದೀಗ ಸಿನಿಮಾಗಾಗಿ ಅವರು ಗಡ್ಡ ಮೀಸೆಯನ್ನು ತೆಗೆದಿದ್ದು, ಸಂಪೂರ್ಣವಾಗಿ ಭಿನ್ನವಾಗಿ ವಿಗ್ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಇದರಿಂದ ಫ್ಯಾನ್ಸ್ ಸಂಭ್ರಮಿಸಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರ ಜೊತೆಗೆ ಕ್ಯಾರವನ್ ನಿಂದ‌ ಇಳಿದ ಕೂಡಲೇ, ಅಲ್ಲಿನ ಮಹಿಳೆಯರು ನಟ ಶಿವಣ್ಣ ಅವರಿಗೆ ಆರತಿ ತೆಗೆದು ದೃಷ್ಟಿ ಬೊಟ್ಟು ಇಟ್ಟು ಸ್ವಾಗತಿಸಿದರು. ನಂತರ ಶೂಟಿಂಗ್ ಗೆ ಮರಳಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

15 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 day ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 day ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 day ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

1 day ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago