ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.

ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.

Ramesh Babu

Journalist

Recent Posts

ಎಲ್‌ಪಿಜಿ ಸಿಲಿಂಡರ್ ಗಾಗಿ ಮುಗಿಬಿದ್ದ ಜನ

ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಕ್ಕಟ್ಟು ಭಾರತಕ್ಕೂ ತಟ್ಟಿರುವ ಹಿನ್ನೆಲೆ ದೇಶಾದ್ಯಂತ ಅಡುಗೆ ಅನಿಲ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಪ್ರಸ್ತುತ…

44 minutes ago

ಯುಗಾದಿ ಹಬ್ಬದ ಅಂಗವಾಗಿ ಗ್ರಾಮದಲ್ಲಿ ಇಸ್ಪೀಟ್ ಆಟ:‌ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ: ಠಾಣೆಗೆ ಕರೆತಂದಿದ್ದವರ ಪೈಕಿ ಕಾಂತರಾಜು ಅನುಮಾನಾಸ್ಪದ ಸಾವು: ಠಾಣೆಯಲ್ಲಿ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

ಇಸ್ಪೀಟ್ ಆಡುತ್ತಿದ್ದಾರೆಂದು ವಶಕ್ಕೆ ಪಡೆದಿದ್ದ ವ್ಯಕ್ತಿಯೊಬ್ಬರು ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿದ ಹಿನ್ನೆಲೆ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಘಟನೆ…

6 hours ago

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

1 day ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

1 day ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

1 day ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

1 day ago