ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.

ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

6 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

6 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

10 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

11 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago