ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.

ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago