ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.

ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

4 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

7 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

12 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

13 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

13 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

15 hours ago