ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಗಾಗಿ “ಸಖಿ”ಕಾರ್ಯಕ್ರಮ

ಬೆಂಗಳೂರು: ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನದ ಆರೈಕೆಯ ಬಗ್ಗೆ ಕಾಳಜಿ ವಹಿಸಲು “ಸಖಿ” ಕಾರ್ಯಕ್ರಮವನ್ನು ಫೋರ್ಟಿಸ್‌ ಆಸ್ಪತ್ರೆ ಪ್ರಾರಂಭಿಸಿದೆ.

ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ಹಿರಿಯ ಸಲಹೆಗಾರ್ತಿ ಡಾ. ಮೋನಿಕಾ ಪನ್ಸಾರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಈ ಕುರಿತು ಮಾತನಾಡಿದ ಅವರು, ಕ್ಯಾನ್ಸರ್‌ ಎಂಬುದು ದೈಹಿಕ ಕಾಯಿಲೆಯ ಜೊತೆಗೆ ಅದೊಂದು ಮಾನಸಿಕ ಕಾಯಿಲೆಯೂ ಹೌದು. ಕ್ಯಾನ್ಸರ್‌ನಿಂದ ಬದುಕುಳಿದ ಬಳಿಕ ಅವರ ಜೀವನ ಆರೈಕೆ ಅತಿ ಮುಖ್ಯವಾದದ್ದು. ಅವರನ್ನು ಮಾನಸಿಕವಾಗಿ, ಭಾವನಾತ್ಮಕವಾಗಿ ಹೊರತರುವುದು ಹೆಚ್ಚು ಅಗತ್ಯ. ಅದಕ್ಕಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ “ಸಖಿ” ಹೆಸರಿನಲ್ಲಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಈ ಕಾರ್ಯಕ್ರಮದ ಅಡಿಯಲ್ಲಿ ಕ್ಯಾನ್ಸರ್‌ನಿಂದ ಬದುಕುಳಿದವರ ಜೀವನ ಆರೈಕೆಯ ಬಗ್ಗೆ ಗಮನ ಹರಿಸುವುದು ಹಾಗೂ ಇಡೀ ಸಮಾಜದಲ್ಲಿ ಅವರು ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು ಎಂಬುದರ ಬಗ್ಗೆ ಮಾನಸಿಕವಾಗಿ ಅವರಿಗೆ ಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಸುಮಾರು ೧೦೦ಕ್ಕೂ ಅಧಿಕ ಮಂದಿ ಪಾಲ್ಗೊಂಡಿದಿದ್ದು ವಿಶೇಷ.

ಕ್ಯಾನ್ಸರ್‌ನಿಂದ ಬದುಕುಳಿದ ಪ್ರಭಾ ಉನ್ನಿಕೃಷ್ಣನ್ ಮಾತನಾಡಿ, ಕ್ಯಾನ್ಸರ್‌ನಿಂದ ಬದುಕುಳಿಯುವುದು ಕೇವಲ ದೈಹಿಕ ಸವಾಲುಗಳನ್ನು ಜಯಿಸುವುದು ಮಾತ್ರವಲ್ಲ, ಅದರೊಂದಿಗೆ ಬರುವ ಭಾವನಾತ್ಮಕ ಮತ್ತು ಮಾನಸಿಕ ಅಡೆತಡೆಗಳನ್ನು ಎದುರಿಸುವ ಶಕ್ತಿಯನ್ನು ಕಂಡುಕೊಳ್ಳುವುದು. ಈ ಕಾರ್ಯಕ್ರಮವು ನನಗೆ ಮತ್ತು ಇತರ ಅನೇಕರಿಗೆ ಭರವಸೆಯ ದಾರಿದೀಪವಾಗಿದೆ, ನಾವು ನಮ್ಮ ಕಥೆಗಳನ್ನು ಹಂಚಿಕೊಳ್ಳಲು, ಒಬ್ಬರಿಗೊಬ್ಬರು ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇದೊಂದು ಉತ್ತಮ ಸ್ಥಳವಾಗಿದೆ. ಇದರ ಭಾಗವಾಗಲು ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ ಎಂದರು.

ಫೋರ್ಟಿಸ್ ಹಾಸ್ಪಿಟಲ್ಸ್ ಬೆಂಗಳೂರಿನ ಬಿಸಿನೆಸ್ ಹೆಡ್ ಅಕ್ಷಯ್ ಒಲೆಟಿ ಮಾತನಾಡಿ, “ಫೋರ್ಟಿಸ್‌ನಲ್ಲಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಷ್ಟೇ ಆಸ್ಪತ್ರೆಗಳ ಕೆಲಸವಲ್ಲ. ಚಿಕಿತ್ಸೆಯ ಬಳಿಕ ಅವರ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆಸ್ಪತ್ರೆಗಳು ನೆರವಾಗಬೇಕು. ಹೀಗಾಗಿ ನಮ್ಮ ಆಸ್ಪತ್ರೆಯು ಕ್ಯಾನ್ಸರ್ ಪೀಡಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಸಖಿ ಕಾರ್ಯಕ್ರಮದ ಮೂಲಕ ನಮ್ಮ ಬದ್ಧತೆಯನ್ನು ತೋರಿಸುತ್ತಿದೆ ಎಂದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

15 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago