ಕ್ಯಾನ್ಸರ್ನಿಂದ ಬಳಲುತ್ತಿರುವ 12 ರಿಂದ 14 ವರ್ಷದೊಳಗಿನ ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಶ್ರೀ ಪೊಲೀಸ್ ಸಮವಸ್ತ್ರ ಧರಿಸಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ 1 ದಿನದ ಮಟ್ಟಿಗೆ ಪೊಲೀಸ್ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದರು.
ಪೊಲೀಸ್ ಆಯುಕ್ತರ ಜೊತೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರವನ್ನು ಅನಾವರಣಗೊಳಿಸಿದರು.
ಇದು ವಿಶ್ವ ಕ್ಯಾನ್ಸರ್ ದಿನವಾದ ಮಂಗಳವಾರ(ಫೆ.4) ಕಿಡ್ಸ್ ವಾರಿಯರ್ಸ್ (ಪೀಡಿಯಾಟ್ರಿಕ್ ಕ್ಯಾನ್ಸರ್ ಮಕ್ಕಳ) ಕನಸುಗಳನ್ನು ನನಸಾಗಿಸಲು ಬೆಂಗಳೂರು ನಗರ ಪೊಲೀಸ್ ಇಲಾಖೆ ಆಯೋಜಿಸಿದ ಮಾನವೀಯ ಕಾರ್ಯಕ್ರಮವಾಗಿದೆ.
ವಿಶ್ವಾಸ್, ಜೀವನ್ ಕುಮಾರ್, ದಾನಮ್ಮ ಮತ್ತು ದಿವ್ಯಾಶ್ರೀ (12 ರಿಂದ 14 ವರ್ಷದ ಮಕ್ಕಳು) ಅವರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ “ಒಂದು ದಿನದ ಪೊಲೀಸ್ ಅಧಿಕಾರಿ” ಆಗಿ ಸೇವೆ ಸಲ್ಲಿಸುವ ಅಪರೂಪದ ಅನುಭವ ಪಡೆದಿದ್ದಾರೆ. ಈ ಹೃದಯಸ್ಪರ್ಶಿ ಕಾರ್ಯಕ್ರಮವು ಈ ಧೈರ್ಯಶಾಲಿ ಮಕ್ಕಳಿಗೆ ಸ್ಫೂರ್ತಿ ನೀಡಲು ಮತ್ತು ಸಂತೋಷ ತರಲು ಉದ್ದೇಶಿತವಾಗಿದೆ. ಇದರೊಂದಿಗೆ ಟ್ರಾಫಿಕ್ ಪೊಲೀಸ್ ಮ್ಯೂಸಿಯಂ ಭೇಟಿಯ ಮೂಲಕ ರಸ್ತೆ ಸುರಕ್ಷತೆ ಮತ್ತು ಜನರ ಪ್ರಾಣ ಉಳಿಸಲು ಬೆಂಗಳೂರು ಪೊಲೀಸರು ಹೇಗೆ ಕೆಲಸ ನಿರ್ವಹಿಸುತ್ತಾರೆ ಎಂಬುವುದನ್ನು ಅರ್ಥೈಸುವುದು ಈ ಕಾರ್ಯದ ಪ್ರಮುಖ ಭಾಗವಾಗಿತ್ತು ಎಂದು ಹೇಳಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣೆಯವರು ಹಲವಾರು ದ್ವಿಚಕ್ರ ವಾಹನಗಳ ಕಳ್ಳತನದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಬಂಧಿತನಿಂದ ಸುಮಾರು ₹4 ಲಕ್ಷ ಮೌಲ್ಯದ 8 ಕಳ್ಳತನದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನವನ್ನು ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ನಾಗರಿಕರು ಪಾರ್ಕಿಂಗ್ ಮಾಡುವಾಗ ತಮ್ಮ ವಾಹನಗಳನ್ನು ಸುರಕ್ಷಿತವಾಗಿ ಲಾಕ್ ಮಾಡಬೇಕೆಂದು ವಿನಂತಿಸುತ್ತೇವೆ ಎಂದು ತಿಳಿಸಿದರು.
ಮಡಿವಾಳ ಪೊಲೀಸ್ ಠಾಣೆ ಅಧಿಕಾರಿಗಳಿಂದ ಅಂತರರಾಜ್ಯ ಕಳ್ಳನ ಬಂಧನ! ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಹಾಗೂ ತೆಲಂಗಾಣ ಸೇರಿದಂತೆ 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಯನ್ನು ಮಡಿವಾಳ ಪೊಲೀಸರು ವಶಕ್ಕೆ ಪಡೆದು ಮನೆ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಒಟ್ಟು ₹12.25 ಲಕ್ಷ ಮೌಲ್ಯದ 181 ಗ್ರಾಂ ಚಿನ್ನ ಮತ್ತು 333 ಗ್ರಾಂ ಬೆಳ್ಳಿಯನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮತ್ತು ಸಹಚರನು ತಪ್ಪೊಪ್ಪಿಕೊಂಡಿದ್ದು, ತನಿಖೆ ಮುಂದುವರಿದಿದೆ ಎಂದರು.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…